ಖ್ವಾಜಾ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹಲವು ರಾಜಕೀಯ, ಧಾರ್ಮಿಕ ಮುಖಂಡರು, ಖ್ವಾಜಾ ಅವರನ್ನು ಭಾರತದ ಮುಖವಾಣಿ ಎಂದು ಆರೋಪಿಸಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ದಿ ನ್ಯೂಸ್ ಇಂಟರ್ ನ್ಯಾಷನಲ್ ವರದಿಯ ಪ್ರಕಾರ, ಪಾಕಿಸ್ತಾನದ ಹಲವು ನಾಯಕರು, ಧಾರ್ಮಿಕ ಮುಖಂಡರು ಹಫೀಜ್ ಸಯೀದ್ ನನ್ನು ಪಾಕಿಸ್ತಾನದ ಮಹಾನ್ ದೇಶ ಭಕ್ತ ಎಂದು ಹೇಳಿದ್ದು, ಖ್ವಾಜಾ ಅವರ ಹೇಳಿಕೆಗೆ ಯಾವುದೇ ಆಧಾರವಿಲ್ಲ ಎಂದಿದ್ದಾರೆ.