ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ: ರಾಜಿನಾಮೆಗೆ ಮುಂದಾದ ಪಂಕಜಾ ಮುಂಡೆ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ಸ್ವಕ್ಷೇತ್ರ ಬೀಡ್ ಜಿಲ್ಲೆಯಲ್ಲಿ ಪಕ್ಷ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಸಚಿವ....
ಪಂಕಜಾ ಮುಂಡೆ
ಪಂಕಜಾ ಮುಂಡೆ
Updated on
ಮುಂಬೈ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಮ್ಮ ಸ್ವಕ್ಷೇತ್ರ ಬೀಡ್ ಜಿಲ್ಲೆಯಲ್ಲಿ ಪಕ್ಷ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಮಹಾರಾಷ್ಟ್ರ ಸಚಿವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಪಂಕಜಾ ಮುಂಡೆ ಅವರು ಗುರುವಾರ ಹೇಳಿದ್ದಾರೆ.
ಪಂಕಜಾ ಮುಂಡೆ ರಾಜಿನಾಮೆಗೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಅವರ ರಾಜಿನಾಮೆಯನ್ನು ನಾನು ಅಂಗೀಕರಿಸುವುದಿಲ್ಲ. ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ ಎಂದಿದ್ದಾರೆ.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾವ್ ಸಾಹೇಬ್ ದನ್ವೆ ಅವರು ಸಹ ಮುಂಡೆ ರಾಜಿನಾಮೆಗೆ ವಿರುದ್ಧ ವ್ಯಕ್ತಪಡಿಸಿದ್ದು, ಗೆಲವು ಯಾವತ್ತೂ ನಮ್ಮ ತಲೆಗೆ ಹತ್ತಬಾರದು ಮತ್ತು ಸೋಲಿನಿಂದ ಕುಗ್ಗಬಾರದು ಎಂದು ಹೇಳಿದ್ದಾರೆ.
ಪಂಕಜಾ ಮುಂಡೆ ಅವರು ಯಾವ ಕಾರಣಕ್ಕೆ ರಾಜಿನಾಮೆ ನೀಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ ರಾಜಿನಾಮೆಯಿಂದ ಜನರ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com