ಕಾಂಗ್ರೆಸ್ ಪಕ್ಷ ಸೋತಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಪಕ್ಷದ ಹಿರಿಯ ಸದಸ್ಯ ಮಿಳಿಂದ್ ಡಿಯೋರಾ, ಶಿವಸೇನೆ-ಬಿಜೆಪಿಯನ್ನು ಕಟ್ಟಿಹಾಕುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಪಡಿಸಿದ್ದಾರೆ. ಫೆ.23 ರಂದು ಘೋಷಣೆಯಾದ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ-ಶಿವಸೇನೆ ಮೇಲುಗೈ ಸಾಧಿಸಿದ್ದರೆ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಗಳಿಸಿತ್ತು.