ನವದೆಹಲಿ: ದೇಶದಾದ್ಯಂತ ಶಿವರಾತ್ರಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಕ್ರವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದೆಲ್ಲೆಡೆ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಮೂಲಕ ದೇಶದ ಜನತೆದೆ ಹೃದಯಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
ದೇಶದೆಲ್ಲೆಡೆ ಶಿವಾಲಯಗಳಲ್ಲಿ ಶಿವಾರಾಧನೆಗಳು ನಡೆಯುತ್ತಿದ್ದು, ವಾರಣಾಸಿಯಲ್ಲಿ ವಿಶೇಷ ಪೂಜೆಗಳು ಆರಂಭಗೊಂಡಿವೆ. ಯಮುನಾ, ಗಂಗಾ ನದಿಯಲ್ಲಿ ಭಕ್ತರು ಜಲಾಭಿಷೇಕ ಮಾಡುತ್ತಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಶಿವಭಕ್ತರು ಇಂದು ಬೆಳಿಗ್ಗೆಯಿಂದಲೇ ಉಪವಾಸ ವ್ರತಗಳನ್ನು ಆರಂಭಿಸಿದ್ದಾರೆ.
Advertisement