ಎಸ್ಎಫ್ಐ ಕಾರ್ಯಕರ್ತ ಮಾವೋ ಛವನ್ ಮಾತನಾಡಿ, ಯೋಧರ ಕುರಿತಂತೆ ಸೋಲಾಪುರ್ ಎಂಎಲ್'ಸಿ ಪ್ರಶಾಂತ್ ಪರಿಛರಕ್ ಅವರು ಅವಹೇಳನಕಾರಿ ಮಾತುಗಳನ್ನಾಡಿದ್ದು ಹಾಗೂ ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ನಡೆದ ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ವಿವಿ ಕ್ಯಾಂಪಸ್ ನಲ್ಲಿ ಎಸ್ಎಫ್ಐ ಪ್ರತಿಭಟನೆ ನಡೆಸುತ್ತಿತ್ತು. ನಮ್ಮ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎಬಿವಿಪಿ ಕಾರ್ಯಕರ್ತರು ಇದ್ದಕ್ಕಿದ್ದಂತೆ ಸ್ಥಳಕ್ಕೆ ಬಂದು ನಮ್ಮ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದಾರೆಂದು ಹೇಳಿದ್ದಾರೆ.