ಕೆಲ ದಿನಗಳ ಹಿಂದಷ್ಟೇ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಗುಜರಾತ್ ಪ್ರವಾಸೋದ್ಯಮ ಇಲಾಖೆಯ ರಾಯಭಾರಿ ಆಗಿರುವ ಅಮಿತಾಬ್ ಬಚ್ಚನ್ ಅಹ್ಮದಾಬಾದ್ ನಲ್ಲಿರುವ ಕತ್ತೆಗಳ ರಕ್ಷಿತಾರಣ್ಯದ ಬಗ್ಗೆ ಜಾಹೀರಾತಿನಲ್ಲಿ ಮಾಹಿತಿ ನೀಡುವ ದೃಶ್ಯವಿದೆ. ಕತ್ತೆಗಳಿಗಾಗಿ ಪ್ರಚಾರ ಮಾಡುವ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ? ಆದರೆ, ಗುಜರಾತಿನ ಜನತೆ ಕತ್ತೆಗಳಿಗಾಗಿ ಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲ ಮಾಡಿ ಅವರು ನಾನು ಸ್ಮಶಾನಕ್ಕಾಗಿ ಮಾತ್ರ ಕೆಲಸ ಮಾಡುತ್ತಿದ್ದೇನೆಂದು ಆರೋಪಿಸುತ್ತಾರೆ. ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಳಿ ಈ ಮೂಲಕ ಮನವಿಯೊಂದನ್ನು ಮಾಡಿಕೊಳ್ಳುತ್ತೇನೆ, ಇನ್ನು ಮುಂದೆ ಕತ್ತೆಗಳಿಗಾಗಿ ಪ್ರಚಾರ ಮಾಡಬೇಡಿ ಎಂದು ಹೇಳಿದ್ದರು.