ನವದೆಹಲಿ: ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹೇಳಿಕೆಗಳನ್ನು ಕೆಲವು ರಾಜಕೀಯ ವ್ಯಕ್ತಿಗಳು ನೀಡುತ್ತಿರುವುದು ಅನಾರೋಗ್ಯಕರ ಪ್ರವೃತ್ತಿಯಾಗಿದ್ದು, ಇಂತಹ ಟೀಕೆಗಳನ್ನು ಬಿಡುವಂತೆ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.
ಗುರುತಿಸಿಕೊಂಡಿರುವ ಎಲ್ಲಾ ರಾಜಕೀಯ ಪಕ್ಷಗಳ ನಾಯಕರಿಗೆ ಪತ್ರ ಕಳುಹಿಸಿರುವ ಚುನಾವಣಾ ಆಯೋಗ ಪ್ರಚಾರ ಸಂದರ್ಭದಲ್ಲಿ ರಾಜಕೀಯ ನಾಯಕರು ಸಂಯಮ ಕಾಪಾಡಿಕೊಳ್ಳುವಂತೆ ಹೇಳಿದೆ.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ರೇಕಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.