ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಗ್ರ ಅಭಿವೃದ್ಧಿಗೆ ಉದಾಹರಣೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ರಂಜಾನ್ ಹಬ್ಬದ ಸಂದರ್ಭದಲ್ಲಿ ವಿದ್ಯುತ್ ಇದ್ದರೆ, ದೀಪಾವಳಿ ಹಬ್ಬದಲ್ಲೂ ವಿದ್ಯುತ್ ಇರಬೇಕು ಎಂದಿದ್ದರು. ಈ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು ನರೇಂದ್ರ ಮೋದಿ ಪ್ರಧಾನಿ ಕಾರ್ಯಾಲಯದ ಘನತೆಯನ್ನೇ ಹಾಳುಮಾಡಿದ್ದಾರೆ ಎಂದಿದೆ.