ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಾರ್ಹತೆಯನ್ನೂ ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ಮನ್ ಪ್ರೀತ್ ಸಿಂಗ್ ಬಾದಲ್, ರೈಲ್ವೆ ಸಚಿವ ಸುರೇಶ್ ಪ್ರಭು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈಲ್ವೆ ಇಲಾಖೆ ಡಿಜಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆದಿರಲಿಲ್ಲ ಎಂದು ಹೇಳಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಕಾನ್ಪುರ ರೈಲು ದುರಂತವನ್ನು ಭಾರತದ ವಿರುದ್ಧ ನಡೆದಿರುವ ವಿಧ್ವಂಸಕ ಕೃತ್ಯದ ಸಂಚು ಎಂದಿದ್ದರು. ಇದೇ ಹೇಳಿಕೆಯನ್ನು ಚುನಾವಣೆಯ ಪ್ರಚಾರದಲ್ಲೂ ಹೇಳಿದ್ದಾರೆ. ಸುಳ್ಳು ಹೇಳಿಕೆ ನೀಡಿರುವ ಪ್ರಧಾನಿ ಮೋದಿ ಕ್ಷಮೆ ಯಾಚಿಸಬೇಕೆಂದು ಬಾದಲ್ ಆಗ್ರಹಿಸಿದ್ದಾರೆ.