ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ದೇಶ ದ್ರೋಹಿ ಘೋಷಣೆ ಕೂಗಿದ ಆರೋಪಿಗಳಾದ ಉಮರ್ ಖಲಿದ್ ಮತ್ತು ರಶೀದ್ ದೆಹಲಿಯ ರಾಮ್ಜಾಸ್ ಕಾಲೇಜಿನಲ್ಲಿ ಸೆಮಿನಾರ್ ಮಾಡಲು ಅವಕಾಶ ನೀಡಿದ್ದನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ದೆಹಲಿಯ ಶ್ರೀರಾಮ ಮಹಿಳಾ ಕಾಲೇಜಿನ ವಿದ್ಯಾರ್ಥಿ ಗುರ್ಮೆಹರ್ ಕೌರ್ ರಾಮ್ಜಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ನಾನು ಎಬಿವಿಪಿಗೆ ಹೆದರುವುದಿಲ್ಲ ಎಂಬ ಅಭಿಯಾನ ಆರಂಭಿಸಿದ್ದರು. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.