ಕಾಸರಗೋಡು ಸಮೀಪ ಕಾರು-ಟ್ರಕ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
ಕಾಸರಗೋಡು: ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸಾವಿಗೀಡಾದವರು ತ್ರಿಶೂರ್ ನ ಚೆಲಕ್ಕರದವರಾಗಿದ್ದಾರೆ.
ಮೃತಪಟ್ಟವರನ್ನು ಡಾ.ರಾಮನಾರಾಯಣನ್ ಅವರ ಪತ್ನಿ ವಲ್ಸಲಾ, ಪುತ್ರ ರಂಜಿತ್ ಮತ್ತು ಆತನ ಸ್ನೇಹಿತ ನಿತಿನ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಎಎಲ್ಎನ್ ರಾವ್ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕ್ರಿಸ್ ಮಸ್ ರಜೆಯ ಬಳಿಕ ಇವರಿಬ್ಬರನ್ನು ಕಾಲೇಜಿನಲ್ಲಿ ಬಿಟ್ಟು ಬರಲೆಂದು ದಂಪತಿ ಹೊರಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com