ಕಾಸರಗೋಡು ಸಮೀಪ ಕಾರು-ಟ್ರಕ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on
ಕಾಸರಗೋಡು: ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಸಾವಿಗೀಡಾದವರು ತ್ರಿಶೂರ್ ನ ಚೆಲಕ್ಕರದವರಾಗಿದ್ದಾರೆ.
ಮೃತಪಟ್ಟವರನ್ನು ಡಾ.ರಾಮನಾರಾಯಣನ್ ಅವರ ಪತ್ನಿ ವಲ್ಸಲಾ, ಪುತ್ರ ರಂಜಿತ್ ಮತ್ತು ಆತನ ಸ್ನೇಹಿತ ನಿತಿನ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ಯುವಕರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಎಎಲ್ಎನ್ ರಾವ್ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕ್ರಿಸ್ ಮಸ್ ರಜೆಯ ಬಳಿಕ ಇವರಿಬ್ಬರನ್ನು ಕಾಲೇಜಿನಲ್ಲಿ ಬಿಟ್ಟು ಬರಲೆಂದು ದಂಪತಿ ಹೊರಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com