ಹೊಡೆದಾಟದಲ್ಲಿ ಕಣ್ಣು ಕಳೆದುಕೊಂಡಿದ್ದ ವ್ಯಕ್ತಿಗೆ 17 ವರ್ಷಗಳ ನಂತರ ಸಿಕ್ಕ ನ್ಯಾಯ

ಹೊಡೆದಾಟದಲ್ಲಿ ಕಣ್ಣು ಕಳೆದುಕೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಕ್ತಿಗೆ 17 ವರ್ಷಗಳ ನಂತರ ನ್ಯಾಯ ದೊರೆತಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಜಾಫರ್ ನಗರ: ಹೊಡೆದಾಟದಲ್ಲಿ ಕಣ್ಣು ಕಳೆದುಕೊಂಡು ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಕ್ತಿಗೆ 17 ವರ್ಷಗಳ ನಂತರ ನ್ಯಾಯ ದೊರೆತಿದೆ.

1999 ರ ಜೂನ್ 16 ರಂದು ಉತ್ತರ ಪ್ರದೇಶದ ಪತೇಪುರ್ ಗ್ರಾಮದಲ್ಲಿ ವಿದ್ಯುತ್ ತಂತಿ ಕದ್ದ ಆರೋಪದ ಮೇಲೆ ಇಬ್ಬರು ಸಹೋದರರು ವಿಜಯ್ ಪಾಲ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ವಿಜಯ್ ಪಾಲ್ ದೃಷ್ಟಿ ಕಳೆದುಕೊಂಡಿದ್ದ.

ಇಬ್ಬರು ಅಪರಾಧಿಗಳಿಗೆ ತಲಾ 5 ಸಾವಿರ ರು ದಂಡ ಹಾಗೂ 10 ವರ್ಷ ಜೈಲುವಾಸ ಶಿಕ್ಷೆ ನೀಡಿ ಜಿಲ್ಲಾ ಸೆಷನ್ಸ್ ಕೋರ್ಟ್ ಆದೇಶಿಸಿದೆ ಎಂದು ಸರ್ಕಾರಿ ವಕೀಲ ಜಿತೇಂದ್ರ ತ್ಯಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com