ಭಯೋತ್ಪಾದನೆಯ ಉತ್ತೇಜನಕ್ಕೆ ಪಾಕಿಸ್ತಾನ ಮುದ್ರಿಸುತ್ತಿದ್ದ ಭಾರತೀಯ ರೂಪಾಯಿಯ ನಕಲಿ ನೋಟುಗಳನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿತ್ತು. ಆದರೆ ನೋಟು ನಿಷೇಧದ ನಂತರ ನಕಲಿ ನೋಟುಗಳ, ಹವಾಲ ದಂಧೆಗೆ ಕಡಿವಾಣ ಬಿದ್ದಿದ್ದು, ಕಾಶ್ಮೀರದಲ್ಲಿ ಕಲ್ಲುತೂರಾಟ ಮಾಡುವವರಿಗೆ, ಭಯೋತ್ಪಾದಕರಿಗೆ ಹಣ ನೀಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ, ಪರಿಣಾಮ ಶೇ.6೦ ರಷ್ಟು ಭಯೋತ್ಪಾದಕ ಚಟುವಟಿಕೆಗಳು ಬಂದ್ ಆಗಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.