ನ್ಯಾಯಮೂರ್ತಿ ಐ.ಎಸ್.ಮೆಹ್ತಾ ಅವರು ಇಂದು ಜಾಮೀನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದರು. ಈ ವೇಳೆ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ ಒಂದು ಗಂಭೀರ ವಿಷಯವಾಗಿದ್ದು, ಎಸ್ ಪಿ ತ್ಯಾಗಿ ಸೇರಿದಂತೆ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳು ತನಿಖೆ ಪ್ರಕ್ರಿಯೆ ವಿಳಂಬ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಬಿಐ ದೂರಿದೆ. ಅಲ್ಲದೆ ಕೆಳ ನ್ಯಾಯಾಲಯ ಸಾಕ್ಷ್ಯಗಳಿಗೆ ವಿರುದ್ಧವಾಗಿ ಆರೋಪಿಗೆ ಜಾಮೀನು ನೀಡಿರುವುದು ಕಾನೂನು ಬಾಹಿರ. ಹೀಗಾಗಿ ಈ ಕೂಡಲೇ ತ್ಯಾಗಿಯ ಜಾಮೀನನ್ನು ರದ್ದುಗೊಳಿಸಬೇಕು ಎಂದು ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮನವಿ ಮಾಡಿದರು.