ಡೆಹ್ರಾಡೂನ್: ತೀವ್ರ ರಕ್ತದ ಒತ್ತಡ ಹಾಗೂ ಕತ್ತು ನೋವಿನಿಂದಾಗಿ ಉತ್ತರಾಖಂಡ್ ಮುಖ್ಯಮಂತ್ರಿ ಹರಿಶ್ ರಾವತ್ ಅವರು ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಕ್ತದ ಒತ್ತಡ ತೀವ್ರ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು 69 ವರ್ಷದ ರಾವತ್ ಅವರನ್ನು ಡೂನ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿಗಳ ಮಾಧ್ಯಮ ಉಸ್ತುವಾರಿ ಸುರೇಂದ್ರ ಕುಮಾರ್ ಅವರು ಪಿಟಿಐಗೆ ತಿಳಿಸಿದ್ದಾರೆ.
ವೈದ್ಯರ ತಂಡವೊಂದು ರಾವತ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದೆ ಎಂದು ಅವರು ಹೇಳಿದ್ದಾರೆ.