ಭದ್ರತಾ ಪಡೆಗಳ ಕ್ಷೇಮ ಸರ್ಕಾರದ ಆದ್ಯತೆ: ಕಿರಣ್ ರಿಜಿಜು

ದೇಶ ಗಡಿ ಕಾಯುವ ಯೋಧರ ಕ್ಷೇಮ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ...
ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು
ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು

ನವದೆಹಲಿ; ದೇಶ ಗಡಿ ಕಾಯುವ ಯೋಧರ ಕ್ಷೇಮ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಹೇಳಿದ್ದಾರೆ.

ಗಡಿಯಲ್ಲಿ ಯೋಧರು ಎದುರಿಸುತ್ತಿರುವ ಪರಿಸ್ಥಿತಿ ಕುರಿತಂತೆ ಯೋಧನೊಬ್ಬ ಹೃದಯ ವಿದ್ರಾವಕ ವಿಡಿಯೋವೊಂದನ್ನು ಜನತೆಯೊಂದಿಗೆ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದ ಗಡಿ ಕಾಯುವ ಯೋಧರ ಕ್ಷೇಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಅಸಂಬದ್ಧತೆಗಳು ಕಂಡು ಬಂದರೂ ಸೂಕ್ತ ರೀತಿಯಲ್ಲಿ ವ್ಯವಹರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ ಗಡಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಇಂತಹ ಯಾವುದೇ ಪರಿಸ್ಥಿತಿಗಳು ಕಂಡುಬಂದಿರಲಿಲ್ಲ. ಎಲ್ಲವೂ ಸಾಮಾನ್ಯವಾಗಿಯೇ ಇತ್ತು ಅವರು ರಿಜಿಜು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com