ಈ ವರ್ಷ ಜಲ್ಲಿಕಟ್ಟು ನಡೆದೇ ತೀರುತ್ತದೆ, ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ: ಸಿಎಂ ಪನ್ನೀರಸೆಲ್ವಂ

ಪ್ರಸಕ್ತ ವರ್ಷ ತಮಿಳುನಾಡು ರಾಜ್ಯದಲ್ಲಿ ಜಲ್ಲಿಕಟ್ಟು ಕ್ರೀಡೆ ನಡೆದೇ ತೀರುತ್ತದೆ. ಈ ವಿಚಾರದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ...
ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ
ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ

ಚೆನ್ನೈ: ಪ್ರಸಕ್ತ ವರ್ಷ ತಮಿಳುನಾಡು ರಾಜ್ಯದಲ್ಲಿ ಜಲ್ಲಿಕಟ್ಟು ಕ್ರೀಡೆ ನಡೆದೇ ತೀರುತ್ತದೆ. ಈ ವಿಚಾರದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ಅವರು ಬುಧವಾರ ಹೇಳಿದ್ದಾರೆ.

ಜಲ್ಲಿಕಟ್ಟು ವಿವಾದ ಸಂಬಂಧ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ ಅವರು, ಈ ವರ್ಷ ಜಲ್ಲಿಕಟ್ಟು ಕ್ರೀಡೋತ್ಸವ ತಮಿಳುನಾಡಿನಲ್ಲಿ ನಡೆದೇ ತೀರುತ್ತದೆ. ಕ್ರೀಡೋತ್ಸವ ಪುನರಾರಂಭಿಸುವ ಯತ್ನಗಳಿಂದ ತಮಿಳುನಾಡು ಸರ್ಕಾರ ಯಾವುದೇ ಕಾರಣಕ್ಕೂ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com