ಜೆಪಿ ಅನುಯಾಯಿಯಾಗಿದ್ದ ನಿತೀಶ್ ಕುಮಾರ್, ತಾವು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಅಂದರೆ 2009ರಲ್ಲಿ ಈ ಯೋಜನೆ ಜಾರಿಗೆ ತಂದಿದ್ದರು. 3,100 ಮಂದಿ ಈ ಯೋಜನೆ ಅಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದಾರೆ. ಅದರಲ್ಲಿ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಸಹ ಇದ್ದಾರೆ. ಸ್ವತಃ ನಿತೀಶ್ ಕುಮಾರ್ ಈ ಪಿಂಚಣಿಗೆ ಅರ್ಹರಿದ್ದರೂ ಅವರು ಪಡೆಯುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.