ಬಟಿಂಡಾ: ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಮೇಲೆ ಯುವಕನೊಬ್ಬ ಶೂ ಎಸೆದ ಘಟನೆ ಬುಧವಾರ ನಡೆದಿದೆ.
ಪ್ರಕಾಶ್ ಸಿಂಗ್ ಬಾದಲ್ ಅವರು ಇಂದು ಬಟಿಂಡಾದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಅಪರಿಚಿತ ಯುವಕನೊಬ್ಬ ಶೂ ಎಸೆದಿದ್ದು, ಸಿಎಂ ಕೈಯಲ್ಲಿದ್ದ ಗಾಜಿನ ಲೋಟ ಪುಡಿಪುಡಿಯಾಗಿದೆ.
ಈ ಸಂಬಂಧ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.