ಪಾಕಿಸ್ತಾನ ಗಡಿಯೊಳಕ್ಕೆ ನುಸುಳಿ ಅಲ್ಲಿ ಸೆರೆ ಸಿಕ್ಕಿರುವ ಯೋಧ ಚಂದು ಚವ್ಹಾಣ್ ಬಗ್ಗೆ ಮಾಹಿತಿ ಕಲೆಹಾಕಲು ಭಾರತದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು ಈವರೆಗೆ ಸುಮಾರು 15ರಿಂದ 20 ಬಾರಿ ಪಾಕಿಸ್ತಾನದ ಸೇನಾ ಕಾರ್ಯಾಚರಣೆಯ ಮಹಾ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ ಮಾತಾಡಿದ್ದಾರೆ. ಆ ಪ್ರಯತ್ನಗಳಿಂದಾಗಿ ಚಂದು ಬದುಕಿರುವುದು ದೃಢಪಟ್ಟಿತ್ತು. ಇದೀಗ, ಭಾರತದ ಸತತ ಪ್ರಯತ್ನಗಳಿಂದ ಪಾಕಿಸ್ತಾನ ಶೀಘ್ರವೇ ಆತನನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ ಎಂದರು.