ಲಖನೌ: ಉತ್ತರ ಪ್ರದೇಶದ ಕೆಲ ಭಾಗಗಳಲ್ಲಿ ತೀವ್ರ ಚಳಿಯಿಂದಾಗಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣ ಹಿಮಾವೃತಗೊಂಡಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಕಠಿಣವಾಗುವುದು. ಚಳಿ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಲಖನೌನಲ್ಲಿ ತಾಪಮಾನ 7 ಡಿಗ್ರಿಗಿಂತಲೂ ಕೆಳಗಿಳಿದಿದ್ದು ಕೆಲವೆಡೆಗಳಲ್ಲಿ ಶೂನ್ಯಕ್ಕಿಂತಲೂ ಕೆಳಕ್ಕಿಳಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.