ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್ ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿರುವ ಅವರು, ಬಿಎಸ್ ಪಿ ಪಕ್ಷವೊಂದೇ ಬಿಜೆಪಿಯನ್ನು ಅಧಿಕಾರದಿಂದ, ಉತ್ತರ ಪ್ರದೇಶದಿಂದ ದೂರವಿಡಲು ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ವರ್ಚಸ್ಸು ಸಂಪೂರ್ಣ ಕುಗ್ಗಿದೆ. ಬಿಜೆಪಿ ಹಾಗೂ ಸಮಾಜವಾದಿ ಪಕ್ಷ ಒಪ್ಪಂದ ಮಾಡಿಕೊಂಡಿವೆ ಎಂದು ಮಾಯಾವತಿ ಆರೋಪಿಸಿದ್ದಾರೆ.