ಶೈಕ್ಷಣಿಕ ಅರ್ಹತೆ ಮಾಹಿತಿ ನೀಡದಂತೆ ದೆಹಲಿ ವಿವಿಗೆ ಇರಾನಿ ಆದೇಶ: ಎಸ್ ಒಎಲ್

ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯ ಮಾಹಿತಿಯನ್ನು ಆರ್ ಟಿ ಐ ಕಾರ್ಯಕರ್ತನಿಗೆ ನೀಡಬಾರದು ಎಂದು ದೆಹಲಿ ವಿಶ್ವ ವಿದ್ಯಾನಿಲಯಕ್ಕೆ ಕೇಂದ್ರ ಸಚಿವೆ ...
ಸ್ಮೃತಿ ಇರಾನಿ
ಸ್ಮೃತಿ ಇರಾನಿ
Updated on

ನವದೆಹಲಿ: ತಮ್ಮ ಶೈಕ್ಷಣಿಕ ವಿದ್ಯಾರ್ಹತೆಯ ಮಾಹಿತಿಯನ್ನು ಆರ್ ಟಿ ಐ ಕಾರ್ಯಕರ್ತನಿಗೆ ನೀಡಬಾರದು ಎಂದು ದೆಹಲಿ ವಿಶ್ವ ವಿದ್ಯಾನಿಲಯಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆದೇಶಿಸಿದ್ದಾರೆ ಎಂದು ದೆಹಲಿಯ ಮುಕ್ತ ಕಲಿಕಾ ಶಾಲೆ ಕೇಂದ್ರ ಮಾಹಿತಿ ಆಯೋಗಕ್ಕೆ ಹೇಳಿದೆ.

ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರ ವಿದ್ಯಾರ್ಹತೆಯ ಎಲ್ಲಾ ದಾಖಲೆಗಳನ್ನು ನೀಡುವಂತೆ ದೆಹಲಿಯ ಮುಕ್ತ ಕಲಿಕಾ ಶಾಲೆ ಕೇಂದ್ರ ಮಾಹಿತಿ ಆಯೋಗ ಸೂಚಿಸಿದೆ.

ಇರಾನಿ ವಿದ್ಯಾರ್ಹತೆ ಬಗೆಗಿನ ಮಾಹಿತಿಗಳನ್ನೊಳಗೊಂಡ ದಾಖಲೆಗಳನ್ನು ನೀಡುವಲ್ಲಿ ವಿಫಲವಾಗಿರುವ ದೆಹಲಿ ವಿವಿಗೆ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಶೋಕಾಸ್ ನೊಟೀಸ್ ನೀಡಿದ್ದಾರೆ.

2004, 2011 ಹಾಗೂ 2014 ರ ಚುನಾವಣೆ ಸಂದರ್ಭಗಳಲ್ಲಿ ಸ್ಮೃತಿ ಇರಾನಿ ಪದವಿ ವಿಚಾರವಾಗಿ ಸರಿಯಾದ ಪ್ರಮಾಣಪತ್ರ ನೀಡಿಲ್ಲ ಎಂದು ಅರ್ಜಿ ಸಲ್ಲಿಸಲಾಗಿತ್ತು.ಈ ಸಂಬಂಧ ಮಾಹಿತಿ ನೀಡುವಂತೆ ದೆಹಲಿ ವಿವಿಗೆ ಕೇಂದ್ರ ಮಾಹಿತಿ ಆಯೋಗ ಸೂಚಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com