ಬಂಧಿತ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಆಸ್ಪತ್ರೆಗೆ ದಾಖಲು

ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನ ಸಂಸದ ಸುದೀಪ್ ಬಂಡೋಪಾಧ್ಯಾಯ ಎಸ್ ಸಿಬಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುದೀಪ್ ಬಂಡೋಪಾಧ್ಯಾಯ
ಸುದೀಪ್ ಬಂಡೋಪಾಧ್ಯಾಯ
ಭುವನೇಶ್ವರ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣದ ಸಂಬಂಧ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನ ಸಂಸದ ಸುದೀಪ್ ಬಂಡೋಪಾಧ್ಯಾಯ ಎಸ್ ಸಿಬಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. 
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನ ಸಂಸದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅನಾರೋಗ್ಯ ಕಾಣಿಸಿಕೊಂಡ ಬೆನ್ನಲ್ಲೇ ಸುದೀಪ್ ಬಂಡೋಪಾಧ್ಯಾಯ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿನ ವೈದ್ಯರು ಬಂಡೋಪಾಧ್ಯಾಯ ಅವರನ್ನು ಎಸ್ ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಎಸ್ ಸಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ವಿಶೇಷ ಜೈಲಿನಲ್ಲಿ ಇದ್ದ ಸುದೀಪ್ ಬಂಡೋಪಾಧ್ಯಾಯ ಅವರ ಆರೋಗ್ಯದಲ್ಲಿ ಈ ಹಿಂದೆಯೂ ವ್ಯತ್ಯಯ ಉಂಟಾಗಿದ್ದ ಹಿನ್ನೆಲೆಯಲ್ಲಿ ಜ.12 ರಿಂದ ಅವರನ್ನು ಮತ್ತೋರ್ವ ಬಂಧಿತ ಟಿಎಂಸಿ ಸಂಸದ ತಪಸ್ ಪಾಲ್ ಅವರೊಂದಿಗೆ ಜೈಲಿನ ಆಸ್ಪತ್ರೆಯಲ್ಲೇ ಇರಿಸಲಾಗಿತ್ತು.  
ಜ.12 ರಂದು ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ಸುದೀಪ್ ಬಂಡೋಪಾಧ್ಯಾಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com