ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಆಂಧ್ರ ಪ್ರದೇಶ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರದ 2 ಲಕ್ಷ ರೂಪಾಯಿ ಪರಿಹಾರದ ಜೊತೆಗೆ ನಮ್ಮ ಸರ್ಕಾರ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.