ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ದುರಂತ: ನಕ್ಸಲೀಯರ ಪಾತ್ರ ನಿರಾಕರಿಸಿದ ಒಡಿಶಾ ಪೊಲೀಸರು

ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಅಪಘಾತದ ಹಿಂದೆ ಮಾವೋವಾದಿಗಳ ಪಾತ್ರವನ್ನು ...
ಅಪಘಾತ ಸಂಭವಿಸಿದ ಸ್ಥಳದ ದೃಶ್ಯ
ಅಪಘಾತ ಸಂಭವಿಸಿದ ಸ್ಥಳದ ದೃಶ್ಯ
Updated on
ಭುವನೇಶ್ವರ್: ಹಿರಾಖಂಡ್ ಎಕ್ಸ್ ಪ್ರೆಸ್ ರೈಲು ಅಪಘಾತದ ಹಿಂದೆ ಮಾವೋವಾದಿಗಳ ಪಾತ್ರವನ್ನು ಒಡಿಶಾ ಪೊಲೀಸರು ತಳ್ಳಿ ಹಾಕಿದ್ದಾರೆ.
ಜಗ್ದಲ್ಪುರ್-ಭುವನೇಶ್ವರ ಎಕ್ಸ್ ಪ್ರೆಸ್ ರೈಲು ಅಪಘಾತದ ಹಿಂದೆ ಮಾವೋವಾದಿಗಳ ಪಾತ್ರವಿರುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಒಡಿಶಾ ಡಿಜಿಪಿ ಕೆ.ಬಿ.ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಜೊತೆ ಪರಾಮರ್ಶೆ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಈ ಪ್ರತಿಕ್ರಿಯೆ ನೀಡಿದರು.
ನಕ್ಸಲ್ ಪೀಡಿತ ರಾಜ್ಯಕ್ಕೆ ಸಮೀಪದಲ್ಲಿ ಅಪಘಾತ ಸಂಭವಿಸಿರುವುದರಿಂದ ಮಾವೋವಾದಿಗಳು ರೈಲ್ವೆ ಹಳಿಗಳನ್ನು ನಾಶಪಡಿಸಿ ಅಪಘಾತವನ್ನುಂಟುಮಾಡಿರಬಹುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದರು.
ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಹಿರಿಯ ಅಧಿಕಾರಿಯೊಬ್ಬರು ಅಪಘಾತದಲ್ಲಿ ನಕ್ಸಲ್ ರ ಭಾಗಿಯ ಶಂಕೆಯನ್ನು ನಿರಾಕರಿಸಿದ್ದಾರೆ.
ಮಾವೋವಾದಿಗಳ ಪಾಲ್ಗೊಳ್ಳುವಿಕೆಯನ್ನು ನಾವು ಸಂಪೂರ್ಣವಾಗಿ ತಳ್ಳಿಹಾಕುತ್ತೇವೆ. ಕುನೆರು ಮಾವೋವಾದಿ ಪೀಡಿತ ವಲಯವಲ್ಲ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com