ಬಿಹಾರ ಸರ್ಕಾರದ ಶಿಫಾರಸಿನ ಅನ್ವಯ ಕ್ಷಮೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು 2016ರ ಆಗಸ್ಟ್ 8ರಂದು ಕೇಂದ್ರ ಗೃಹ ಸಚಿವಾಲಯವ ತಿರಸ್ಕರಿಸಿತ್ತು. ಆದರೆ ದಯಾ ಮನವಿಯನ್ನು ಪರಿಗಣಿಸುವಲ್ಲಿ ರಾಜ್ಯ ಸರ್ಕಾರ ಮಾಡಿರುವ ವಿಳಂಬ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪರಿಶೀಲನೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪರಿಗಣಿಸಿದ್ದಾರೆ. ಈ ಮೂಲಕ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದ್ದಾರೆ.