ನವದೆಹಲಿ:ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಅವರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಕಲ್ಲಿದ್ದಲು ಹಗರಣ ಕೇಸಿನಲ್ಲಿ ರಂಜಿತ್ ಸಿನ್ಹಾ ಅವರ ಹೆಸರು ಕೇಳಿಬರುತ್ತಿದೆ.
ಕಲ್ಲಿದ್ದಲು ಹಗರಣ ಆರೋಪಿಗಳ ಜೊತೆ ಅಕ್ರಮ ವ್ಯವಹಾರದಲ್ಲಿ ರಂಜಿತ್ ಸಿನ್ಹಾ ಭಾಗಿಯಾಗಿದ್ದರು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಸುಪ್ರೀಂ ಕೋರ್ಟ್ ಹೇಳಿದೆ.
ಈ ಹಿನ್ನೆಲೆಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕೇಳಿಬರುತ್ತಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ರಂಜಿತ್ ಸಿನ್ಹಾ ಅವರ ತನಿಖೆ ನಡೆಸುವಂತೆ ಆದೇಶಿಸಿದೆ.