ಉತ್ತರ ಪ್ರದೇಶ ಸಿಎಂ ಅಭ್ಯರ್ಥಿ ಸ್ಥಾನದಿಂದ ಹಿಂದೆ ಸರಿದಿದ್ದೇನೆ: ಶೀಲಾ ದೀಕ್ಷಿತ್

ಯುವ ರಾಜಕಾರಣಿಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ...
ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್
ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್
ನವದೆಹಲಿ: ಯುವ ರಾಜಕಾರಣಿಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹಿಂದೆ ಸರಿದಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್-ಸಮಾಜವಾದಿ ಪಕ್ಷಗಳ ಮೈತ್ರಿಯನ್ನು ಪ್ರಶಂಸಿಸಿದ ಅವರು, ನಮಗೀಗ ಬಿಡುಗಡೆ ಸಿಕ್ಕಿದೆ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಒಂದಾಗಿ ಕೋಮುವಾದಿ ಬಣಗಳನ್ನು ಸೋಲಿಸಲು ಹೊರಟಿರುವುದು ಸಂತಸದಾಯಕ ಎಂದು ಎಎನ್ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನದಿಂದ ಹಿಂದೆ ಸರಿದಿರುವ ಬಗ್ಗೆ ಅವರು ಪ್ರತಿಕ್ರಿಯೆ ನೀಡಿ, ಉತ್ತರ ಪ್ರದೇಶ ಚುನಾವಣೆಗೆ ಒಂದೇ ಪಕ್ಷ ಅಥವಾ ಮೈತ್ರಿ ಪಕ್ಷಗಳಿಂದ ಇಬ್ಬರು ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ನಾನು ನನ್ನ ಹೆಸರನ್ನು ಹಿಂತೆಗೆದುಕೊಂಡು ಯುವ ರಾಜಕಾರಣಿಗಳಿಗೆ ಹಾದಿ ಮಾಡಿಕೊಡುತ್ತೇನೆ ಎಂದು ಹೇಳಿದರು.
ದೇಶದ ಮತ್ತು ರಾಜ್ಯದ ಬೆಳವಣಿಗೆ ಕಾಂಗ್ರೆಸ್ ನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com