2014 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣದಲ್ಲಿ ತೊಡಗಿದೆ ಎಂದು ಟೀಕಿಸಿದ್ದರು. ಅಷ್ಟೇ ಅಲ್ಲದೇ ಚುನಾವಣೆಗಳಲ್ಲಿ ಬಿಜೆಪಿ ನಾಯಕರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬಾರದು ಎಂದು ರಾಜ್ಯ ಬಿಜೆಪಿ ಘಟಕಗಳಿಗೆ ಇತ್ತೀಚೆಗಷ್ಟೇ ಸ್ಪಷ್ಟ ಸೂಚನೆ ರವಾನಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ, ಸೂಚನೆಗಳನ್ನು ಉತ್ತರಾಖಂಡ್ ಬಿಜೆಪಿಯೇ ನಿರ್ಲಕ್ಷಿಸಿದಂತೆ ತೋರುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಮೋದಿ ಮಾದರಿಯನ್ನು ಅಳವಡಿಸಿಕೊಂಡಂತಿದ್ದು, ಒಂದು ಕುಟುಂಬದಿಂದ ಒಬ್ಬರಿಗೇ ಟಿಕೆಟ್ ನೀಡಲು ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ತೀರ್ಮಾನಿಸಿದೆ.