ಸರ್ಜಿಕಲ್ ಸ್ಟ್ರೈಕ್ ನಲ್ಲಿ ಭಾಗವಹಿಸಿದ್ದ ಯೋಧರಿಗೆ ಶೌರ್ಯ ಪ್ರಶಸ್ತಿ

ಗಣರಾಜ್ಯೋತ್ಸವ ಸಂದರ್ಭದಲ್ಲಿ, ಕಳೆದ ವರ್ಷ ಸರ್ಜಿಕಲ್ ದಾಳಿಯಲ್ಲಿ ಪಾಲ್ಗೊಂಡ 4 ಮತ್ತು 9 ಪಾರಾ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಗಣರಾಜ್ಯೋತ್ಸವ ಸಂದರ್ಭದಲ್ಲಿ, ಕಳೆದ ವರ್ಷ ಸರ್ಜಿಕಲ್ ದಾಳಿಯಲ್ಲಿ ಪಾಲ್ಗೊಂಡ 4 ಮತ್ತು 9 ಪಾರಾ ವಿಶೇಷ ಪಡೆಯ ಕಮಾಂಡಿಂಗ್ ಅಧಿಕಾರಿಗಳಿಗೆ ಯುದ್ಧ ಸೇವಾ ಪದಕವನ್ನು ಕೇಂದ್ರ ಸರ್ಕಾರ ನೀಡಿದೆ.
4 ಪಾರಾ ಪಡೆಯ ಮೇಜರ್ ಮೊಹಿತ್ ಸೂರಿ ಅವರಿಗೆ ಕೀರ್ತಿ ಚಕ್ರ ಮತ್ತು ಇತರ ಐವರು ಭದ್ರತಾ ಸಿಬ್ಬಂದಿಗೆ ಶೌರ್ಯ ಚಕ್ರ ಘೋಷಿಸಲಾಗಿದೆ.ಯುದ್ಧದಲ್ಲಿ ಭಾಗವಹಿಸಿದವರಿಗೆ ನೀಡುವ ಶೌರ್ಯ ಪ್ರಶಸ್ತಿ ಇವಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಜಮ್ಮು-ಕಾಶ್ಮೀರದ ಉರಿ ಪ್ರಾಂತ್ಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಭಯೋತ್ಪಾದಕರ ಲಾಂಚ್ ಪಾಡ್ ಮೇಲೆ ಸೇನಾ ಯೋಧರು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com