ನನ್ನ ಹೋರಾಟ ದೇಶದ ಪ್ರಾಮಾಣಿಕ ಜನರ ಪರವಾಗಿ ಎಂದ ಪ್ರಧಾನಿ, ಅಡ್ಡಿ, ತೊಂದರೆಗಳನ್ನು ಮಾಡಲು ಪ್ರಯತ್ನಿಸುವವರಿಗೆ ನಾನು ಎಂದಿಗೂ ತಲೆಬಾಗುವುದಿಲ್ಲ ಎಂಬುದನ್ನು ನನ್ನನ್ನು ಟೀಕಿಸುವವರಿಗೆ ಹೇಳುತ್ತೇನೆ, ಪಂಜಾಬ್ ಜನತೆ ಮುಳುಗಡೆ ಅಂಚಿನಲ್ಲಿರುವ ಹಡಗಿನಲ್ಲಿ ಕಾಲಿಡಲು ಬಯಸುತ್ತಾರೆಯೇ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ತನ್ನ ವಿನಾಶದ ಕೊನೇಯ ಹಂತದಲ್ಲಿದೆ. ವಿಧಾನಸಭೆ ಚುನಾವಣೆಗೆ ಮುನ್ನ ಹತಾಶೆಯಿಂದ ಕಾಂಗ್ರೆಸ್ ಪಕ್ಷ ಎಲ್ಲೆಡೆ ಸುತ್ತುತ್ತಾ ಮತ ಭಿಕ್ಷೆ ಕೇಳುತ್ತಿದೆ. ನೀರಿನಿಂದ ಹೊರಬಂದ ಮೀನಿನಂತೆ ಕಾಂಗ್ರೆಸ್ ಪುನಃ ಅಧಿಕಾರಕ್ಕೆ ಬರಲು ನುಲಿಯುತ್ತಿದೆ, ಇಂದು ಕಾಂಗ್ರೆಸ್ ನ ನಿಜವಾದ ಉದ್ದೇಶವೇನು, ಅವರ ಗುರಿಯೇನು ಎಂದು ಯಾರು ಕೂಡ ಹೇಳಲು ಸಾಧ್ಯವಿಲ್ಲ ಎಂದು ಟೀಕಿಸಿದರು.