ಅಖಿಲೇಶ್ ಯಾದವ್ - ರಾಹುಲ್ ಗಾಂಧಿ,
ಅಖಿಲೇಶ್ ಯಾದವ್ - ರಾಹುಲ್ ಗಾಂಧಿ,

ಉ.ಪ್ರದೇಶ ಚುನಾವಣೆ: ನಾಳೆ ಅಖಿಲೇಶ್, ರಾಹುಲ್ ರಿಂದ ಜಂಟಿ ಪ್ರಚಾರ

ಉತ್ತರ ಪ್ರದೇಶ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ....
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು 'ಯುಪಿ ಕೊ ಯೆಹ್ ಸಾಥ್ ಪಸಂದ್ ಹೈ' ಎಂಬ ಶಿರ್ಷಿಕೆಯಡಿ ಭಾನುವಾರ ಜಂಟಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಸಮಾಜವಾದಿ ಪಕ್ಷ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಇದೇ ಮೊದಲ ಬಾರಿಗೆ ಈ ಇಬ್ಬರು ನಾಯಕರು ಒಂದೇ ವೇದಿಕೆ ಹಂಚಿಕೊಳ್ಳುತ್ತಿದ್ದು, ನಾಳೆ ಮಧ್ಯಾಹ್ನ ಲಖನೌನಲ್ಲಿ ಜಂಟಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಲಿದ್ದಾರೆ.
ಪತ್ರಿಕಾಗೋಷ್ಠಿಯ ನಂತರ ಹಜರತ್ ಗಂಜ್ ಪ್ರದೇಶದಲ್ಲಿರುವ ಗಾಂಧಿ ಪ್ರತಿಮೆಯಿಂದ  ಇಬ್ಬರು ನಾಯಕರು ನಗರದ ಪ್ರಮುಖ ಪ್ರದೇಶಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com