ಪಟ್ಟಭದ್ರ ಹಿತಾಸಕ್ತಿಗಳಿಗೆ ಮತ ನೀಡದಂತೆ ರಾಜ್ಯದ ಜನತೆಗೆ ಮನವಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಂಜಾಬ್ ಗಡಿಯಲ್ಲಿರುವ ರಾಜ್ಯವಾಗಿದ್ದು, ಪಾಕಿಸ್ತಾನ ಪಂಜಾಬ್ ನ್ನು ಅಸ್ಥಿರಗೊಳಿಸುವ ಅವಕಾಶಕ್ಕಾಗಿ ಎದುರುನೋಡುತ್ತಿರುತ್ತದೆ. ಒಂದು ವೇಳೆ ಪಂಜಾಬ್ ನಲ್ಲಿ ಅಸಮರ್ಥ, ಪಟ್ಟಭದ್ರ ಹಿತಾಸಕ್ತಿಗಳ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಅದು ಪಂಜಾಬ್ ಹಾಗೂ ದೇಶಕ್ಕೇ ಮಾರಕವಾಗಲಿದೆ ಎಂದು ಎಚ್ಚರಿಸಿದ್ದಾರೆ.