ಜನವರಿ 31ರಂದು ಹಾಲಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರು ನಿವೃತ್ತಿಯಾಗುತ್ತಿದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಆರ್ ಕೆ ದತ್ತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಪೊಲೀಸ್ ಮಹಾ ನಿರ್ದೇಶಕ ಹುದ್ದೆಗೆ ಸಾಕಷ್ಟು ಪೈಪೋಟಿ ಇತ್ತಾದರೂ ಯಾವುದೇ ರೀತಿಯ ವಿವಾದಗಳಿಗೆ ಎಡೆ ಮಾಡಿಕೊಡಬಾರದು ಎಂದು ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ ಅವರು ಸೇವಾ ಹಿರಿತನದ ಆಧಾರದ ಮೇಲೆ ಆರ್ ಕೆ ದತ್ತಾ ಅವರನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಹುದ್ದೆಗೆ ನೇಮಕ ಮಾಡಿದ್ದರು.