ಪ್ರಸ್ತುತ ಉಗ್ರರು ದಾಳಿ ನಡೆಸುತ್ತಿಲ್ಲ ಎಂದು ನಾನು ಹೇಳುತ್ತಿಲ್ಲ. ಈಗಲೂ ಉಗ್ರರು ದಾಳಿ ನಡೆಸುತ್ತಿದ್ದಾರೆ. ಆದರೆ, ಉರಿ ಉಗ್ರ ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಸೀಮಿತ ದಾಳಿ ನಡೆಸಿತ್ತು. ಈ ಮೂಲಕ ಸ್ವರಕ್ಷಣೆಗೆ ಭಾರತ ಸಿದ್ಧವಾಗಿದೆ ಎಂಬ ಸಂದೇಶವನ್ನು ಇಡೀ ವಿಶ್ವಕ್ಕೆ ರವಾಸಿದ್ದೆವು. ಅಮೆರಿಕ ರಾಷ್ಟ್ರ ಹೊರತುಪಡಿಸಿ ವಿಶ್ವದ ಯಾವುದೇ ರಾಷ್ಟ್ರಗಳು ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದೆವು ಎಂದು ತಿಳಿಸಿದ್ದಾರೆ.