ಸರ್ಕಾರಿ ಅಧಿಕೃತ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ್ದ ಸಿಎಂ ತ್ರಿವೇಂದ್ರ ಅವರು ಬೆಂಗಾವಲು ಪಡೆಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಲಚ್ಚಿವಾಲಾ ಎಂಬ ಪ್ರದೇಶಕ್ಕೆ ಬರುತ್ತಿದ್ದಂತೆಯೇ ರಸ್ತೆಯೊಂದರ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ವ್ಯಕ್ತಿಯನ್ನು ನೋಡಿದ್ದಾರೆ. ಕೂಡಲೇ ಕಾರು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದ ಸಿಎಂ ವ್ಯಕ್ತಿಯ ಬಳಿ ಹೋಗಿದ್ದಾರೆ.