ಜೂನ್ 27, ಜಾರ್ಖಂಡ್ : ಪಶುಸಂಗೋಪನೆಯಲ್ಲಿ ತೊಡಗಿದ್ದ ರೈತ ಉಸ್ಮಾನ್ ಅನ್ಸಾರಿ ಅವರ ಮನೆಯ ಹೊರಗೆ ಸತ್ತ ದನ ಸಿಕ್ಕಿತ್ತು ಎನ್ನಲಾದ ನಂತರ, ಅಂದಾಜು ನೂರು ಜನರ ಗುಂಪು ಅನ್ಸಾರಿ ಮೇಲೆ ಹಲ್ಲೆ ನಡೆಸಿತು. ಅವರ ಮನೆಯ ಒಂದು ಭಾಗಕ್ಕೆ ಬೆಂಕಿ ಹಚ್ಚಿತು. ದಾಳಿ ನಡೆಸಿದವರು ತಮ್ಮ ಮೇಲೆ ಕಲ್ಲು ತೂರಿದ್ದಾರೆ, ಐವತ್ತು ಜನ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು, ಪತ್ರಕರ್ತರ ಬಳಿ ಹೇಳಿದ್ದಾರೆ.