ರಾಜ್ಯಪಾಲರು ನನಗೆ ಬೆದರಿಕೆ ಹಾಕಿ, ಅವಮಾನಿಸಿದ್ದಾರೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರು ನನಗೆ ಬೆದರಿಕೆ ಹಾಕಿದ್ದಲ್ಲದೆ ಅವಮಾನ ಮಾಡಿದ್ದಾರೆ ....
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯಪಾಲ ಕೆ.ಎನ್.ತ್ರಿಪಾಠಿ ಅವರು ನನಗೆ ಬೆದರಿಕೆ ಹಾಕಿದ್ದಲ್ಲದೆ ಅವಮಾನ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಅವರು ನನಗೆ ಬೆದರಿಕೆ ಹಾಕಿದ್ದಾರೆ.... ಅವಮಾನ ಮಾಡಿದ್ದಾರೆ. ಅವರು ಹೀಗೆ ಮಾಡಬಾರದು. ಅವರ ಒಬ್ಬ ನೇಮಕಗೊಂಡ ವ್ಯಕ್ತಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಪಶ್ಚಿಮ ಬಂಗಾಳ ಸಿಎಂ, ನಾನು ಒಬ್ಬ ಚುನಾಯಿತ ಪ್ರತಿನಿಧಿ, ನೀವು ನಾಮ ನಿರ್ದೇಶನಗೊಂಡ ವ್ಯಕ್ತಿ. ಈ ರೀತಿ ಮಾತನಾಡಬಾರದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com