ಭಾರತದಲ್ಲಿ ಈ ಹಿಂದೆ ಉಗ್ರ ದಾಳಿ ನಡೆಸಿದ್ದೇವೆ ಇನ್ನು ಮುಂದೆಯೂ ಯಾವ ಪ್ರದೇಶದಲ್ಲಿ, ಯಾವ ಸಮಯದಲ್ಲಿ ಬೇಕಾದರೂ ಉಗ್ರ ದಾಳಿ ನಡೆಸುತ್ತೇವೆ ಎಂದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ನಾಯಕ ಸಯೀದ್ ಸಲಾಲುದ್ದೀನ್ ಪಾಕ್ ಮಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಸಲಾಲುದ್ದೀನ್ ನ ಸಂದರ್ಶನ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ಮತ್ತಷ್ಟು ಸ್ಪಷ್ಟಪಡಿಸುತ್ತದೆ ಎಂದು ಹೇಳಿದೆ.