ಪಶ್ಚಿಮ ಬಂಗಾಳ ಸಿಎಂ ನಿನ್ನೆ ರಾಜ್ಯಪಾಲರು ತಮಗೆ ಬೆದರಿಕೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ರಾಜ್ಯಪಾಲರು, ಮುಖ್ಯಮಂತ್ರಿಗಳು ನನ್ನ ವಿರುದ್ಧ ಆಧಾರ ರಹಿತ ಆರೋಪದ ಮಾಡುವ ಬದಲು ತಾವು ಮತ್ತು ತಮ್ಮ ಸಂಪುಟ ಸಹೋದ್ಯೋಗಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಿದರೆ ಒಳ್ಳೆದು ಎಂದು ತಿರುಗೇಟು ನೀಡಿದ್ದಾರೆ.