ನಾನು ಬಿಜೆಪಿ ಏಜೆಂಟ್ ಅಲ್ಲ, ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ: ಕಿರಣ್ ಬೇಡಿ

ನಾನು ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.
ಕಿರಣ್ ಬೇಡಿ
ಕಿರಣ್ ಬೇಡಿ
ಚೆನ್ನೈ(ತಮಿಳುನಾಡು): ನಾನು ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಏಜೆಂಟ್ ಎಂದು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಆರೋಪದ ಹಿನ್ನೆಲೆ ಕಿರಣ್ ಬೇಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. 
ನಾನು ಕಾನೂನಿನ ಪ್ರತಿನಿಧಿ, ಕಾನೂನಿನಂತೆ ನಾನು ನಡೆದುಕೊಳ್ಳುತ್ತೇನೆ. ಕಾನೂನನ್ನು ಪೂರೈಸಲು ನಾವು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಕಿರಣ್ ಬೇಡಿ ಹೇಳಿದ್ದಾರೆ. 
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಮೂವರು ಬಿಜೆಪಿ ಸದಸ್ಯರನ್ನು ಎಂಎಲ್ಎ ಆಗಿ ನೇಮಕ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪುದುಚೇರಿಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಶಾಸನ ಸಭೆಯಲ್ಲಿ ಉಗ್ರ ಪ್ರತಿಭಟನೆ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com