ನಾನು ಬಿಜೆಪಿ ಏಜೆಂಟ್ ಅಲ್ಲ, ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ: ಕಿರಣ್ ಬೇಡಿ

ನಾನು ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.
ಕಿರಣ್ ಬೇಡಿ
ಕಿರಣ್ ಬೇಡಿ
Updated on
ಚೆನ್ನೈ(ತಮಿಳುನಾಡು): ನಾನು ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಏಜೆಂಟ್ ಎಂದು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಆರೋಪದ ಹಿನ್ನೆಲೆ ಕಿರಣ್ ಬೇಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. 
ನಾನು ಕಾನೂನಿನ ಪ್ರತಿನಿಧಿ, ಕಾನೂನಿನಂತೆ ನಾನು ನಡೆದುಕೊಳ್ಳುತ್ತೇನೆ. ಕಾನೂನನ್ನು ಪೂರೈಸಲು ನಾವು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಕಿರಣ್ ಬೇಡಿ ಹೇಳಿದ್ದಾರೆ. 
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಮೂವರು ಬಿಜೆಪಿ ಸದಸ್ಯರನ್ನು ಎಂಎಲ್ಎ ಆಗಿ ನೇಮಕ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪುದುಚೇರಿಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಶಾಸನ ಸಭೆಯಲ್ಲಿ ಉಗ್ರ ಪ್ರತಿಭಟನೆ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com