ಗುರು ಪೂರ್ಣಿಮೆ: ಮಹಿಳೆಯರಿಂದ ಪಾದ ತೊಳೆಸಿಕೊಂಡ ಜಾರ್ಖಂಡ್ ಮುಖ್ಯಮಂತ್ರಿ

ಗುರು ಮಹೋತ್ಸವ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ಮಹಿಳೆಯರು ತೊಳೆದಿರುವ ಈ ವಿಡಿಯೋ ಇದೀಗ ...
ರಘವರ್ ದಾಸ್
ರಘವರ್ ದಾಸ್
ಜೆಮ್‌ಶ್ಷೆಡ್‌ಪುರ: ಗುರು ಮಹೋತ್ಸವ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ಮಹಿಳೆಯರು ತೊಳೆದಿರುವ ಈ ವಿಡಿಯೋ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. 
ಜೆಮ್‌ಶ್ಷೆಡ್‌ಪುರ ಬ್ರಹ್ಮ ಲೋಕಧಾನದಲ್ಲಿ ನಡೆಯುತ್ತಿರುವ ಗುರು ಮಹೋತ್ಸವ ಸಮಾರಂಭದಲ್ಲಿ ಮಹಿಳೆಯರಿಬ್ಬರು ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿದ್ದಾರೆ. ಈ ವಿಡಿಯೋ ಇದೀ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಭದ್ರತಾ ಸಿಬ್ಬಂದಿಯೊಟ್ಟಿಗೆ ಬಂದ ರಘುವರ್ ದಾಸ್ ಅವರನ್ನು ದೊಡ್ಡ ತಟ್ಟೆಯೊಂದರಲ್ಲಿ ನಿಲ್ಲಿಸಿ ಹೂವಿನ ಎಸಳುಗಳಿರುವ ನೀರನ್ನು ಇಬ್ಬರು ಮಹಿಳೆಯರು ಬಿಂದಿಗೆಯಿಂದ ಅವರ ಪಾದಕ್ಕೆ ಹಾಕಿ ತೊಳೆಯುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com