ಉಗ್ರರು ದಾಳಿ ಸಂಚು ಹಿನ್ನಲೆಯಲ್ಲಿ ಅಮರನಾಥ ಯಾತ್ರಾರ್ಥಿಗಳಿಗೆ ಭಾರೀ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ, ಉಗ್ರರ ದಾಳಿಗೊಳಗಾದ ಬಸ್ ಅಮರನಾಥ ದೇಗುಲ ಮಂಡಳಿಯಿಂದ ನೋಂದಾಯಿತವಾದ ಬಸ್ ಆಗಿರಲಿಲ್ಲ. ಯಾತ್ರೆಗೆ ಬರುವ ಪ್ರತಿಯೊಂದು ಬಸ್ ಗೂ ಭದ್ರತೆಯನ್ನು ಒದಗಿಸಲಾಗುತ್ತದೆ. ಇದು ಕಡ್ಡಾಯ ನಿಯಮವಾಗಿದೆ. ಆದರೆ, ಯಾತ್ರೆಗೆ ಬಸ್ ನಿಯಮಗಳನ್ನು ಉಲ್ಲಂಘಿಸಿತ್ತು. ನೋಂದಾವಣಿಯಿಲ್ಲದ ಕಾರಣ ಬಸ್ ನಲ್ಲಿ ಭದ್ರತೆಯಿರಲಿಲ್ಲ. ಹೀಗಾಗಿಯೇ ಉಗ್ರರು ದಾಳಿ ನಡೆಸಲು ದಾರಿ ಮಾಡಿಕೊಟ್ಟಂತಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.