ಬಿಹಾರದ ಮೈತ್ರಿ ಕೂಟದಲ್ಲಿ ಗುರುತಿಸಿಕೊಂಡಿರುವ ನಿತೀಶ್ ಕುಮಾರ್ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಗೈರಾಗಲಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಗೆ ಹಿನ್ನಡೆಯುಂಟಾಗಿದೆ. ಪ್ರತಿಪಕ್ಷಗಳು ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಂಬಂಧ ಸಭೆ ನಡೆಸಿದರೆ ಇತ್ತ ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ಶಾಸಕರ ಸಭೆ ನಡೆಸಲಿದ್ದಾರೆ. ಆದರೆ ಕೆಸಿ ತ್ಯಾಗಿ ಹಾಗೂ ಶರದ್ ಯಾದವ್ ಪ್ರತಿಪಕ್ಷಗಳ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.