ತ್ರಾಲ್ ನಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಸೈನಿಕರ ಗುಂಡಿಗೆ 3 ಉಗ್ರರು ಹತ!

ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ ಮುಂದುವರೆದಿರುವಂತೆಯೇ ಉಗ್ರರ ದಾಳಿಗೆ ಖಡಕ್ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಶನಿವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ ಮುಂದುವರೆದಿರುವಂತೆಯೇ ಉಗ್ರರ ದಾಳಿಗೆ ಖಡಕ್ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಶನಿವಾರ 3 ಉಗ್ರರನ್ನು ಹೊಡೆದುರುಳಿಸಿದೆ.

ಉತ್ತರ ಪುಲ್ವಾಮ ಜಿಲ್ಲೆಯ ತ್ರಾಲ್ ನ ಸತೋರಾ ಪ್ರದೇಶದಲ್ಲಿ ಉಗ್ರರು ಅವಿತಿಕರುವ ಕುರಿತು ಖಚಿತ ಮಾಹಿತಿ ಪಡೆದ ಸಿಆರ್ ಪಿಎಫ್ ಹಾಗೂ ಸೇನಾ ಯೋಧರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಸೇನೆಯ ಗುಂಡಿಗೆ 3 ಉಗ್ರರು ಹತರಾಗಿದ್ದರೆ ಮತ್ತೋರ್ವನಿಗಾಗಿ ಹುಡುಕಾಟ ನಡೆದಿದೆ.  ಘಟನಾ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಘಟನಾ ಪ್ರದೇಶವನ್ನು ಸೈನಿಕರು ಸುತ್ತುವರೆದಿದ್ದಾರೆ.

ಕಳೆದ ಜುಲೈ 9ರಂದು ಇದೇ ತ್ರಾಲ್ ನ ಸೇನಾ ಕ್ಯಾಂಪ್ ಮೇಲೆ ಉಗ್ರರು ಗ್ರೆನೇಡ್ ದಾಳಿ ಮಾಡಿದ್ದರು.ಈ ವೇಳೆ ಓರ್ವ ಯೋಧ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ. ಸೇನಾ ಮೂಲಗಳ ಪ್ರಕಾರ ಕಳೆದ ಜನವರಿಯಿಂದ ಈ  ವರೆಗೂ ಕಣಿವೆರಾಜ್ಯದಲ್ಲಿ ಒಟ್ಟು 102 ಮಂದಿ ಉಗ್ರರನ್ನು ಸೇನೆ ಹತ್ಯೆಗೈದಿದೆ ಎಂದು ತಿಳಿದುಬಂದಿದೆ. ಕಳೆದ 7 ವರ್ಷಗಳಲ್ಲಿಯೇ ಈ ಬಾರಿಯೇ ಅತ್ಯಧಿಕ ಸಂಖ್ಯೆಯಲ್ಲಿ ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com