ಭ್ರಷ್ಟಾಚಾರ ಆರೋಪ ಸಾಬೀತು ಮಾಡಿ: ಕಮಲ್ ಹಾಸನ್ ಗೆ ತಮಿಳುನಾಡು ಸಚಿವ ಸವಾಲು

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ....
ಕಮಲ್ ಹಾಸನ್
ಕಮಲ್ ಹಾಸನ್
ಕೊಯಮತ್ತೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ತಮಿಳುನಾಡು ಪೌರಾಡಳಿತ ಸಚಿವ ಎಸ್ ಪಿ ವೇಲುಮಣಿ ಅವರು, ಆರೋಪವನ್ನು ಸಾಬೀತುಪಡಿಸುವಂತೆ ನಟನಿಗೆ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿದ್ದರೆ ಅದನ್ನು ಬಹಿರಂಗಪಡಿಸಲಿ ಎಂದು ತಮಿಳುನಾಡು ಸಚಿವರು ಹೇಳಿದ್ದಾರೆ. ಅಲ್ಲದೆ ಕಮಲ್ ಹಾಸನ್ ಅವರು ತಮ್ಮ ಚಿತ್ರಗಳಿಗೆ ತೆರಿಗೆ ಕಟ್ಟಿರುವ ಮಾಹಿತಿ ನೀಡಲು ಸಿದ್ಧರಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕಮಲ್ ಹಾಸನ್ ಅವರು ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೇಲುಮಣಿ ಅವರು, ಕಮಲ್ ಹಾಸನ್ ಅವರು ಈ ಮುಂಚೆ ಈ ರೀತಿಯ ಆರೋಪ ಮಾಡಿಲ್ಲ. ಆದರೆ ಇತ್ತೀಚಿಗೆ ಹಲವು ವಿಚಾರಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡುವ ಮುನ್ನ ಅವರು ಸೂಕ್ತ ಮಾಹಿತಿ ಸಂಗ್ರಹಿಸುವುದು ಸೂಕ್ತ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com