ನವದೆಹಲಿ: ಬಿಹಾರದ ಮಹಾಮೈತ್ರಿಯಲ್ಲಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ನಿತೀಶ್ ಕುಮಾರ್ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಆರ್ ಜೆಡಿ ಶಾಸಕರೊಂದಿಗೆ ಲಾಲು ಪ್ರಸಾದ್ ಯಾದವ್ ಹಾಗೂ ನಿತೀಶ್ ಕುಮಾರ್ ಪ್ರತ್ಯೇಕ ಸಭೆ ನಡೆಸಲಿದ್ದು, ರಾಷ್ಟ್ರಪತಿ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ತೇಜಸ್ವಿ ಯಾದವ್ ಅವರ ರಾಜೀನಾಮೆ ಕುರಿತೂ ನಿತೀಶ್ ಕುಮಾರ್ ಹಾಗೂ ಲಾಲು ಪ್ರಸಾದ್ ಯಾದವ್ ಚರ್ಚೆ ನಡೆಸಲಿದ್ದಾರೆ. ಸಭೆಗೂ ಮುನ್ನ ಪ್ರತಿಕ್ರಿಯೆ ನೀಡಿರುವ ಲಾಲು ಪ್ರಸಾದ್ ಯಾದವ್ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.